For the best experience, open
https://m.bcsuddi.com
on your mobile browser.
Advertisement

ಸಿದ್ದರಾಮಯ್ಯ ನಿವಾಸದ ಮುಂದೆ ವೃದ್ಧ ಆಕ್ರೋಶ : 'ಬಾಂಬ್‌' ಬೆದರಿಕೆ! ತಬ್ಬಿಬ್ಬಾದ ಪೊಲೀಸರು

05:25 PM Aug 24, 2024 IST | BC Suddi
ಸಿದ್ದರಾಮಯ್ಯ ನಿವಾಸದ ಮುಂದೆ ವೃದ್ಧ ಆಕ್ರೋಶ    ಬಾಂಬ್‌  ಬೆದರಿಕೆ  ತಬ್ಬಿಬ್ಬಾದ ಪೊಲೀಸರು
Advertisement

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ಮುಂದೆ ವೃದ್ಧರೊಬ್ಬರು ಪೊಲೀಸ್ ಅಧಿಕಾರಿಗಳನ್ನು ತಬ್ಬಿಬ್ಬುಗೊಳಿಸಿದ ಪ್ರಸಂಗ ನಡೆದಿದೆ. ಕಾರ್ಯಕ್ರಮದ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಗಾಂಧಿ ಭವನಕ್ಕೆ ಹೋಗಿದ್ದರು. ಇತ್ತ ವೃದ್ಧರೊಬ್ಬರು ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಮನವಿ ಕೊಡಲು ಬಂದಿದ್ದರು. ಆದರೆ ಪೊಲೀಸರು ಆ ವ್ಯಕ್ತಿಯನ್ನ ಮಧ್ಯದಲ್ಲೇ ತಡೆದು ವಿಚಾರಣೆ ನಡೆಸಿದ್ದಾರೆ. ಪೊಲೀಸರ ವಿಚಾರಣೆಗೆ ಸಿಟ್ಟಿಗೆದ್ದ ಹಿರಿಯ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಪದಲ್ಲೇ ಪೊಲೀಸರಿಗೆ ಆವಾಜ್ ಹಾಕಿದ ಅವರು, ‘ಏನ್ರೀ ಹೊಡೀತೀರೇನ್ರಿ, ನನ್ನ ಮೈಮುಟ್ಟ ಬೇಡಿ. ದೂರ ನಿಂತು ಮಾತಾಡಿ, ತಳ್ಳಬೇಡಿ. ಹಿರಿಯ ನಾಗರಿಕರಿಗೆ ಗೌರವ ಕೊಡೋದು ಇದೇನಾ ಎಂದು ಪೊಲೀಸರ ಮೇಲೆ ಕಿಡಿಕಾರಿದ್ದಾರೆ. ಆಗ ಬ್ಯಾಗ್​ನಲ್ಲಿ ಏನಿದೆ ಎಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಿನಿಂದ ಗಂಭೀರ ಪರಿಣಾಮ ಉಂಟುಮಾಡುವ ವಸ್ತುವೊಂದು ಇದೆ ಎಂದು ಅವರದ್ದೇ ಭಾಷೆಯಲ್ಲಿ ಹೇಳಿದ್ದಾರೆ. ಆಗ ಪೊಲೀಸರು ಆಯ್ತು ಹೋಗಪ್ಪ ಎಂದು ಕಳುಹಿಸಿದ್ದಾರೆ. ಕೊನೆಗೆ ಆ ವ್ಯಕ್ತಿಯನ್ನು ಸಮಾಧಾನಪಡಿಸಿ ಗೃಹ ಕಚೇರಿ ಕೃಷ್ಣಾಕ್ಕೆ ಕರೆದೊಯ್ದು ಮನವಿಯನ್ನು ಸ್ವೀಕರಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement

Author Image

Advertisement