'ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುಲಿದೆ'- ಯಡಿಯೂರಪ್ಪ
06:31 PM Sep 04, 2024 IST
|
BC Suddi
Advertisement
ಶಿವಮೊಗ್ಗ : ತೀರ್ಪು ಬಂದ ನಂತರ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು. ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣ ಸಾಬೀತು ಆಗುತ್ತಿದೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ಕೊವಿಡ್ ಹಗರಣದ ತನಿಖಾ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ್ದು, ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸ್ವತಂತ್ರ ಇದೆ. ನಾವು ಯಾವುದೇ ಹೋರಾಟ ಮಾಡಲ್ಲ ಎಂದು ಹೇಳಿದರು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Next Article