ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಿದ್ದುಗೆ ಟಿಕೆಟ್‌ ಹಾರ ಹಾಕಿದ ವಿದ್ಯಾರ್ಥಿನಿ : ಸರ್ಕಾರದ ಸಾಧನೆಯ ಮಾಲೆ ಎಂದ ಸಿಎಂ

11:01 AM Apr 23, 2024 IST | Bcsuddi
Advertisement

ಹಾಸನ : ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅರಸೀಕೆರೆಯ ಚುನಾವಣಾ ಸಂದರ್ಭದಲ್ಲಿ ಕಾನೂನು ವಿದ್ಯಾರ್ಥಿನಿ ಎಂ.ಎ.ಜಯಶ್ರೀ ತಾವು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್​ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದ್ದಾಳೆ.

Advertisement

ವಿದ್ಯಾರ್ಥಿನಿ ಜಯಶ್ರೀ, ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ.

ಹೀಗಾಗಿ ಎಲ್ಲಾ ಫ್ರೀ ಟಿಕೆಟ್​ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ ಎಂದು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ " ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು " ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಹೇಳಿದ್ದಾರೆ.

Advertisement
Next Article