For the best experience, open
https://m.bcsuddi.com
on your mobile browser.
Advertisement

ಸಿರಿಗೆರೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಮಾನನಷ್ಟ ಮೊಕದ್ದಮೆ.!: ಬಿ.ಸಿ.ಪಾಟೀಲ

08:00 AM Aug 09, 2024 IST | BC Suddi
ಸಿರಿಗೆರೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಮಾನನಷ್ಟ ಮೊಕದ್ದಮೆ    ಬಿ ಸಿ ಪಾಟೀಲ
Advertisement

ಬೆಂಗಳೂರು: ಸಿರಿಗೆರೆ ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಏಕವ್ಯಕ್ತಿ ಹೆಸರಿನಲ್ಲಿರುವ ಟ್ರಸ್ಟ್ ರಚಿಸಿಕೊಂಡು ಸರ್ವಾಧಿಕಾರಿಯಂತೆ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿ- ದ್ದಾರೆ. ಮಠದ ಭಕ್ತರನ್ನು ಕುಡುಕರೆಂದು ನಿಂದಿಸಿರುವ ಸ್ವಾಮೀಜಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಭಕ್ತರು ನಿರ್ಧರಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀಮಠ ಪಾಲ್ಕುರಿಕೆ-ಸಿರಿಗೆರೆ ಶ್ರೀತರಳಬಾಳು ಜಗದ್ಗುರು ಬೃಹನ್ಮಠ' ಎಂಬ ಹೆಸರಿತ್ತು. ಆದರೆ, ಈಗಿನ ಪೀಠಾಧಿಪತಿಗಳಾಗಿರುವ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಶ್ರೀಮದುಜ್ಜಯಿನಿ ಸದ್ಧರ್ಮ

Advertisement

60 ವರ್ಷಕ್ಕೆ ಶಿವಾಚಾರ್ಯ ಸ್ವಾಮೀಜಿಯವರು ಪೀಠ ತ್ಯಾಗ ಮಾಡಬೇಕಿತ್ತು. 78 ವರ್ಷಗಳಾಗಿ- ರುವ ಶಿವಮೂರ್ತಿ ಸ್ವಾಮೀಜಿ ಪೀಠ ತ್ಯಾಗ ಮಾಡದೇ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಮಠದ ಭಕ್ತರನ್ನು ಒಡೆದು ಎರಡು ಗುಂಪುಗಳನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಂಹಾಸನ ಶ್ರೀ ತರಳಬಾಳು ಜ ಗದ್ದು ರು ಬೃಹನ್ಮಠ ಎಂದು ಬದಲಿಸಿಕೊಂಡಿ- ದ್ದಾರೆ. 1990ರಲ್ಲಿ ಏಕಮಾತ್ರ ಟ್ರಸ್ಟಿಯ ಟ್ರಸ್ಟ್ ರಚಿಸಿಕೊಂಡು ಮಠದ ಆಸ್ತಿ ವರ್ಗಾವಣೆ ಮಾಡಿಕೊಂಡಿದ್ದಾರೆ.ಟ್ರಸ್ಟ್‌ನ ಬೈ-ಲಾವನ್ನು ಕಡೆಗಣಿಸಿ ಎಲ್ಲ ರೀತಿಯ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ದೂರಿದರು.

Tags :
Author Image

Advertisement