ಸಿಲಿಂಡರ್ ಗ್ಯಾಸ್ ಸ್ಪೋಟ- ಉಡುಪಿ ಮೂಲದ ಇಬ್ಬರು ಸಾವು
02:17 PM Jan 29, 2024 IST
|
Bcsuddi
Advertisement
ಬೆಳಗಾವಿ:ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡು ಇಬ್ಬರು ಮೃತಪಟ್ಟು,ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ನಗರದ ಬಸವನಗಲ್ಲಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.
Advertisement
ಉಡುಪಿ ಮೂಲದ ಕಮಲಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಈ ಕುಟುಂಬ ವಾಸಿಸುತ್ತಿತ್ತು ಅನ್ನುವ ಮಾಹಿತಿ ಲಭ್ಯವಾಗಿದೆ.
ರವಿವಾರ ಮಧ್ಯಾಹ್ನ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ ಸ್ಪೋಟಗೊಂಡಿದ್ದು ಒಂದೇ ಕುಟುಂಬದ ಐವರು ಗಾಯಗೊಂಡಿದ್ದರು.ಸ್ಥಳೀಯರು ಹಾಗೂ ಪೊಲೀಸರು ಸೇರಿ ಈ ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.
ಹೆಚ್ಚಿನ ಚಿಕಿತ್ಸೆಗೆಗಾಗಿ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿವಾರ ಮಧ್ಯರಾತ್ರಿ ಇಬ್ಬರು ಮೃತಪಟ್ಟಿದ್ದಾರೆ.ಈ ಕುರಿತು ಖಡೆಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
Next Article