For the best experience, open
https://m.bcsuddi.com
on your mobile browser.
Advertisement

ಸುಡು ಬಿಸಿಲು|ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆತ- ಇಬ್ಬರು ಮಕ್ಕಳು, ಚಾಲಕನಿಗೆ ಗಾಯ

04:12 PM May 04, 2024 IST | Bcsuddi
ಸುಡು ಬಿಸಿಲು ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆತ  ಇಬ್ಬರು ಮಕ್ಕಳು  ಚಾಲಕನಿಗೆ ಗಾಯ
Advertisement

ಚಲಿಸುತ್ತಿದ್ದ ಕೇರಳ ರಾಜ್ಯದ ಕೆಎಸ್ಸಾರ್ಟಿಸಿ ಬಸ್ಸಿನ ಗಾಜು ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಶನಿವಾರ ಸಂಭವಿಸಿದೆ.

ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಒಡೆದಿದೆ. ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಮಗುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರ ಗಾಯಗೊಂಡಿರುವ ಬಾಲಕ ಕಾಸರಗೋಡು ಚೆರ್ಕಳದ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Author Image

Advertisement