ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸೂರಜ್ ರೇವಣ್ಣಗೆ ರಿಲೀಫ್ – ಎಂಎಲ್ ಸಿ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

07:08 PM Dec 20, 2023 IST | Bcsuddi
Advertisement

ಬೆಂಗಳೂರು: ಸೂರಜ್ ರೇವಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾ ಮಾಡಿದೆ.

Advertisement

ವಕೀಲ ದೇವರಾಜೇಗೌಡ ಎಂಬುವವರು ಸೂರಜ್ ರೇವಣ್ಣ ಅವರನ್ನು ಎಂಎಲ್ ಸಿ ಸ್ಥಾನದಿಂದ ಅನರ್ಹಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿಯನ್ನು ವಜಾ ಮಾಡಿದೆ.

ವಕೀಲ ದೇವರಾಜೇಗೌಡ ಅವರು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಸೂರಜ್ ರೇವಣ್ಣ ಅವರನ್ನು ಎಂಎಲ್ ಸಿ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ಅರ್ಜಿ ವಜಾಗೊಳಿಸಿರುವುದರಿಂದ ಸೂರಜ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Advertisement
Next Article