ಸೆ.2 ಮತ್ತು 3 ಗೌರಸಮುದ್ರ ಮಾರಮ್ಮನ ಜಾತ್ರೆ: ಪ್ರಾಣಿ ಬಲಿ ನಿಷೇಧ
07:27 AM Aug 27, 2024 IST
|
BC Suddi
Advertisement
Advertisement
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೌರಸಮುದ್ರ ಗ್ರಾಮದಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಗೌರಸಮುದ್ರ ಮಾರಮ್ಮ ದೇವಿ ಜಾತ್ರ ಮಹೋತ್ಸವ ನಡೆಯಲಿದೆ. ಈ ಜಾತ್ರೆಗೆ ಲಕ್ಷಾಂತರ ಜನ ಭಕ್ತಾಧಿಗಳು ಆಗಮಿಸಲಿದ್ದಾರೆ.
ಈ ಜಾತ್ರೆಗೆ ಬರುವ ಭಕ್ರಾಧಿಗಳು ಯಾವುದೇ ರೀತಿಯ ಪ್ರಾಣಿ ಬಲಿಯನ್ನು ಮಾಡಬಾರದು ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಆಡಬಾರದು ಎಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ. ಪ್ರಾಣಿ ಬಲಿ, ಅಕ್ರಮ ಮದ್ಯ ಮಾರಾಟ, ಮತ್ತು ಜೂಜಾಟವಾಡಿದ ಪಕ್ಷದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Article