ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಇರುವ ಸೆಲ್ಗೆ ಟಿವಿ ಅಳವಡಿಕೆ
10:29 AM Sep 07, 2024 IST | BC Suddi
Advertisement
ಬಳ್ಳಾರಿ:ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಟಿವಿ ಭಾಗ್ಯ ಸಿಕ್ಕಿದೆ.ದರ್ಶನ್ ಇರುವ ಸೆಲ್ಗೆ ಟಿವಿ ಅಳವಡಿಸಲಾಗಿದೆ. ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಕೆ ಮಾಡಿದ್ದಾರೆ.
ಕೊನೆಗೂ ದರ್ಶನ್ ಸೆಲ್ಗೆ ಟಿವಿ ಬಂದಿದೆ ಎನ್ನಲಾಗಿದೆ. ಕಳೆದ ಐದು ದಿನಗಳ ಹಿಂದೆ ಟಿವಿಗಾಗಿ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಐದು ದಿನಗಳ ನಂತರ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್ಗೆ ಟಿವಿ ಅಳವಡಿಸಲಾಗಿದೆ.
ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. ಅದರೆ ಟಿವಿ ರಿಪೇರಿ ಇದ್ದ ಹಿನ್ನೆಲೆ ಈವರೆಗೂ ನೀಡಿರಲಿಲ್ಲ. ಇಂದು ದರ್ಶನ್ ಇರುವ ಸೆಲ್ಗೆ ಟಿವಿ ನೀಡಲಾಗಿದೆ.
Advertisement
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.