ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹರಿಯಾಣ ಸಿಎಂ ಸೈನಿಗೆ ಕೊ*ಲೆ ಬೆದರಿಕೆ - ಆರೋಪಿ ಬಂಧನ

11:46 AM Oct 13, 2024 IST | BC Suddi
Advertisement

ಚಂಡೀಗಢ :ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಕೊ*ಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಆರೋಪಿಯನ್ನು ಅಜ್ಮೀರ್ ಎಂದು ಗುರುತಿಸಲಾಗಿದ್ದು, ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದವನು ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಮತ ಎಣಿಕೆ ದಿನವಾದ ಅಕ್ಟೋಬರ್ 8 ರಂದು ಅಜ್ಮೀರ್ ವಾಟ್ಸಾಪ್ ಗುಂಪಿನಲ್ಲಿ ಕೊ*ಲೆ ಬೆದರಿಕೆ ಹಾಕಿದ್ದಾನೆ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ಹೇಳಿದ್ದಾರೆ.

ವಿಷಯವು ಪೊಲೀಸರ ಗಮನಕ್ಕೆ ಬಂದ ತಕ್ಷಣ, ಎಫ್ಐಆರ್ ದಾಖಲಿಸಲಾಗಿದೆ, ಮತ್ತು ಅಜ್ಮೀರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ತಿಳಿಸಿವೆ. ಆರೋಪಿ ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನಾ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.

 

Advertisement
Next Article