ಹರಿಹರ ನಗರಸಭೆಯಿಂದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
07:43 AM Nov 09, 2023 IST | Bcsuddi
Advertisement
ದಾವಣಗೆರೆ; ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿನ ವಿವಿಧ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಹರಿಹರ ನಗರವಾಸಿಯಾಗಿರಬೇಕು, ಬಿ.ಪಿ.ಎಲ್ ಪಡಿತರ ಚೀಟಿಯನ್ನು ಹೊಂದಿರಬೇಕು. ಹರಿಹರ ನಗರ ಸಭೆ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 2ರ ಒಳಗಾಗಿ ಅದೇ ಕಛೇರಿಗೆ ಸಲ್ಲಿಸಬೇಕು.
Advertisement
ಹೆಚ್ಚಿನ ಮಾಹಿತಿಗಾಗಿ ಹರಿಹರ ನಗರ ಸಭೆಯ ಸಂಬಂಧಿತ ಶಾಖೆಯನ್ನು ಭೇಟಿ ಮಾಡಲು ಪೌರಾಯುಕ್ತರಾದ ಬಸವರಾಜ ತಿಳಿಸಿದ್ದಾರೆ