ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹಳ್ಳಿಯವರು ವಿದ್ಯುತ್ ಗೋಪುರ ಮುಟ್ಟದಂತೆ ಸೂಚನೆ

07:45 AM Jul 21, 2024 IST | Bcsuddi
Advertisement

 

Advertisement

ಚಿತ್ರದುರ್ಗ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ 220/66/11 ಕೆ.ವಿ ಹಿರಿಯೂರು ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್ ವರೆಗೆ ಹಾಲಿ ಇರುವ 18.928 ಕಿ.ಮೀ ಉದ್ದದ 66 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು ಹಾಗೂ ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿ ಮತ್ತು  66/11 ಕೆ.ವಿ ಹರಿಯಬ್ಬೆ ಉಪ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್‍ವರೆಗೆ ಹಾಲಿ ಇರುವ 9.628 ಕಿ.ಮೀ ಉದ್ದದ 66 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು, ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ ಕಾಮಗಾರಿಯು ಮುಕ್ತಾಯಗೊಂಡಿರುತ್ತದೆ.

ಈ 66 ವಿದ್ಯುತ್ ಮಾರ್ಗವನ್ನು ಜುಲೈ 20ರಂದು ಅಥವಾ ತದನಂತರ ಚೇತನಗೊಳಿಸುವುದರಿಂದ ಈ 66 ಕೆವಿ ಪ್ರಸರಣ ಮಾರ್ಗದ ವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟುವುದಾಗಲಿ, ಹತ್ತುವುದಾಗಲಿ, ಮರದ ರೆಂಬೆ, ಲೋಹದ ತಂತಿಗಳನ್ನು ಹಾಗೂ ಇತರೆ ಯಾವುದೇ ವಸ್ತುಗಳನ್ನು ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದು ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಈ ಮಾರ್ಗದ ಮೊಗಸಾಲೆಯಲ್ಲಿ ಅಪಾಯದ ಮಟ್ಟದಲ್ಲಿ ಇರುವ ಮರಗಳನ್ನು ಸುರಕ್ಷತೆಯ ದೃಷ್ಠಿಯಿಂದ ತೆಗೆದು ಹಾಕಲು ನಿಗಮದ ನಿಯಮಾನುಸಾರ ಸೂಕ್ತ ಪರಿಹಾರ ಪಡೆದುಕೊಂಡು ಮರಗಳನ್ನು ತೆಗೆಯದೇ ಇರುವ ಭೂ ಮಾಲೀಕರು ಕೂಡಲೇ ಮಾರ್ಗದ ಮೊಗಸಾಲೆಯಲ್ಲಿರುವ ಮರಗಳನ್ನು ಕಡಿದು ಹಾಕಲು ಅನುಮತಿ ನೀಡಬೇಕು. ಒಂದು ವೇಳೆ ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಮಾರ್ಗದಿಂದ ಸಾರ್ವಜನಿಕರಿಗೆ ಆಗುವ ಹಾನಿ, ತೊಂದರೆ, ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.

ವಿದ್ಯುತ್ ಹಾದುಹೋಗುವ ಪ್ರದೇಶಗಳು:  ಮ್ಯಾಕ್ಯೂರಹಳ್ಳಿ, ಬಬ್ಬೂರು, ಹೇಮದಳ, ಅಂಬಲಗೆರೆ, ಬಿದರಕೆರೆ, ಹರಿಯಬ್ಬೆ, ಶಿಡ್ಲಯ್ಯನಕೋಟೆ, ಕ್ಯಾತನಮಳೆ, ಗೊಲ್ಲರಹಟ್ಟಿ ಗೂಳ್ಯ, ರಂಗೇನಹಳ್ಳಿ ಮತ್ತು ಚಂದ್ರಗಿರಿ ಗೊಲ್ಲಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಮಾರ್ಗ ಹಾದು ಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags :
ಹಳ್ಳಿಯವರು ವಿದ್ಯುತ್ ಗೋಪುರ ಮುಟ್ಟದಂತೆ ಸೂಚನೆ
Advertisement
Next Article