For the best experience, open
https://m.bcsuddi.com
on your mobile browser.
Advertisement

ಹಸೆಮಣೆ ಏರಬೇಕಿದ್ದ ಯುವತಿ ಆತ್ಮಹತ್ಯೆ..!

09:47 AM Jan 22, 2024 IST | Bcsuddi
ಹಸೆಮಣೆ ಏರಬೇಕಿದ್ದ ಯುವತಿ ಆತ್ಮಹತ್ಯೆ
Advertisement

ಶಿವಮೊಗ್ಗ: ಮದುವೆಗೆ 13 ದಿನಗಳು ಬಾಕಿ ಇರುವಾಗ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.

ಎಂಕಾಂ ಪದವಿ ಪಡೆದಿದ್ದು, ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚೈತ್ರ (26) ಮೃತ ದುರ್ದೈವಿ. ಚೈತ್ರಗೆ ಫೆ.4ರಂದು ವಿವಾಹ ನಿಶ್ಚಯವಾಗಿತ್ತು. ಇನ್ನು ಮದುವೆಗೆ 2 ವಾರಗಳು ಬಾಕಿ ಇರುವ ಹಿನ್ನಲೆಯಲ್ಲಿ ಪೋಷಕರು ಮದುವೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದರು. ಆದರೆ ಇದೀಗ ಹಸೆಮಣೆ ಏರಬೇಕಿದ್ದ ಯುವತಿ ಮಸಣಕ್ಕೆ ಸೇರಿದ್ದಾಳೆ. ಈಕೆ ನನಗೆ ಆರೋಗ್ಯ ಸಮಸ್ಯೆ ಇದೆ ಮದುವೆ ಬೇಡವೆಂದು ವಿರೋಧ ಮಾಡುತ್ತಿದ್ದಳು ಎನ್ನಲಾಗಿದೆ. ಆದರೆ ಮನೆಯವರು ಮನವೊಲಿಸಿದ್ದರು ಎನ್ನಲಾಗಿದೆ. ಈಕೆಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Advertisement
Author Image

Advertisement