For the best experience, open
https://m.bcsuddi.com
on your mobile browser.
Advertisement

ಹಿಂದಿನ ಸರ್ಕಾರದ ತಪ್ಪುಗಳು ಮರುಕಳಿಸಬಾರದು ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ: ಸಿಎಂ

04:37 PM Dec 21, 2023 IST | Bcsuddi
ಹಿಂದಿನ ಸರ್ಕಾರದ ತಪ್ಪುಗಳು ಮರುಕಳಿಸಬಾರದು ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ  ಸಿಎಂ
Advertisement

ಬೆಂಗಳೂರು: ಈಗಿನ ಉಪತಳಿ JN.1 (ಒಮಿಕ್ರಾನ್ ಯಪತಳಿ) ಇದು ಅಪಾಯಕಾರಿಯಲ್ಲ ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಆದರೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಈ ಉಪತಳಿ ರಾಜ್ಯದಲ್ಲಿ 92 ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ICU ನಲ್ಲಿದ್ದಾರೆ. ಆದರೆ ಇವರಿಗೆ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ. ಪ್ರತಿ ದಿನ ದಿನ‌ 5000 ಟೆಸ್ಟ್ ಗಳು ನಡೆಯುತ್ತಿದ್ದು ಬೆಂಗಳೂರಲ್ಲಿ ಸಾವಿರ ಪರೀಕ್ಷೆ ನಡೆಯುತ್ತಿದ್ದೆ ಎಂದು ಮಾಹಿತಿ ನೀಡಿದ್ದಾರೆ.

ಡೆಡಿಕೇಟೆಡ್ ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಇರುತ್ತವೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು. ಲಸಿಕೆಗಳನ್ನು ಸಿದ್ದವಿಟ್ಟುಕೊಳ್ಳಲು ಸೂಚಿಸಲಾಗಿದೆ. ಕೇರಳದಲ್ಲಿ ಪರೀಕ್ಷೆ ಹೆಚ್ಚು. ಆದ್ದರಿಂದ ಪ್ರಮಾಣ ಕೂಡ ಹೆಚ್ಚಿದೆ. ಇಲ್ಲಿ ಪರೀಕ್ಷೆಗಳು ಹೆಚ್ಚಾದಂತೆ ಪತ್ತೆ ಪ್ರಮಾಣವೂ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

Advertisement

ಮಾಧ್ಯಮದವರು ಅನಗತ್ಯ ಪ್ಯಾನಿಕ್ ಸೃಷ್ಟಿಸಬೇಡಿ ಎಂದ ಮನವಿ ಮಾಡಿದ ಸಿಎಂ, ಸಾಕಷ್ಟು ಹಣ ಇದೆ. ಕೋವಿಡ್ ನಿರ್ವಹಣೆಗೆ ಹಣಕಾಸಿಗೆ ಕೊರತೆ ಇಲ್ಲ . ಪರಿಸ್ಥಿತಿ ನೋಡಿಕೊಂಡು ಡೆಡಿಕೇಡೆಡ್ ಆಸ್ಪತ್ರೆಗಳನ್ನು ನಿಗಧಿ ಮಾಡುತ್ತೇವೆ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

Author Image

Advertisement