ಹಿಂದೂ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡದ ತುಘಲಕ್ ಕಾಂಗ್ರೆಸ್ ವಿರುದ್ದ ಬಿಜೆಪಿ ಪ್ರತಿಭಟನೆ
01:47 PM Apr 22, 2024 IST | Bcsuddi
Advertisement
ಬೆಂಗಳೂರು : ರಾಜ್ಯದಲ್ಲಿ ಮಿತಿಮೀರುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಹಾಗೂ ಹದಗೆಟ್ಟ ಕಾನೂನು ಸುವ್ಯವಸ್ಥೆ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು
ಓಲೈಕೆ ರಾಜಕಾರಣಕ್ಕಾಗಿ ಸಮಾಜಘಾತುಕ ಶಕ್ತಿಗಳ ಪುಷ್ಟೀಕರಣ ಮಾಡುತ್ತಾ ಹಿಂದೂಗಳ ರಕ್ಷಣೆಗೆ ಕಿಂಚಿತ್ತೂ ಕಾಳಜಿ ವಹಿಸದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕೆಂಬ ಕರೆ ನೀಡಲಾಯಿತು.
ಪ್ರತಿಭಟನಾಕಾರರು ಹಿಂದೂ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡದ ತುಘಲಕ್ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದರು.ಈ ಸಂದರ್ಭದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ಆರ್ ರಘು ಕೌಟಿಲ್ಯ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಅಧ್ಯಕ್ಷ ಅನಿಲ್ ಥಾಮಸ್, ಜಿಲ್ಲಾಧ್ಯಕ್ಷ ಎಲ್ ನಾಗೇಂದ್ರ, ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
Advertisement