ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ

03:06 PM Sep 20, 2024 IST | BC Suddi
Advertisement

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ.

Advertisement

ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಆಹ್ವಾನಿಸಲಾಗಿದ್ದು, ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ದೊರೆಯಲಿದ್ದು, ಈಗಾಗಲೆ ಗಜಪಡೆ ತಾಲೀಮು ಆರಂಭವಾಗಿದೆ.

ಇನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ.ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. 'ಹಂಪನಾ' ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಅವರು, ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Advertisement
Next Article