'ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣ ಒದಗಿಸುತ್ತೇವೆ' - ಸಿದ್ದರಾಮಯ್ಯ ಘೋಷಣೆ
02:17 PM Nov 30, 2023 IST
|
Bcsuddi
Advertisement
ಬೆಂಗಳೂರು: ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣಕಾಸು ಒದಗಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
Advertisement
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ನೂತನ 262 ಅಂಬುಲೆನ್ಸ್ಗಳ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಅಪಘಾತ ವೇಳೆ, ಹೆರಿಗೆ ವೇಳೆ ಚಿಕಿತ್ಸೆ, ಹೃದಯಾಘಾತ ಹೀಗೆ ಆದಾಗ ಚಿಕಿತ್ಸೆ ಸಿಗದೇ ಸಾಯಬಾರದು ಎಂದರು.
ಇನ್ನು ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣಕಾಸು ಒದಗಿಸ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಎಂಆರ್ಐ ಸ್ಕ್ಯಾನಿಂಗ್ ಸೌಲಭ್ಯ ಇರಬೇಕಿತ್ತು. ವಿವಿಧ ಸ್ಕ್ಯಾನ್ಗಳಿಗೆ ಬಡವರು ವೆಚ್ಚ ಭರಿಸಲು ಆಗಲ್ಲ. ಇಲ್ಲಿಯವರೆಗೆ 25 ಕೋಟಿ ಜನರಿಗೆ ಸಿಎಂ ನಿಧಿಯಡಿ ಪರಿಹಾರ ಕೊಡುವ ಕೆಲಸ ಆಗಿದೆ ಎಂದಿದ್ದಾರೆ.
Next Article