For the best experience, open
https://m.bcsuddi.com
on your mobile browser.
Advertisement

ಹೆಣ್ಣು ಭ್ರೂಣ ಹತ್ಯೆ - ಪ್ರಮುಖ ಆರೋಪಿ ಬಂಧನ

09:49 AM Sep 05, 2024 IST | BC Suddi
ಹೆಣ್ಣು ಭ್ರೂಣ ಹತ್ಯೆ   ಪ್ರಮುಖ ಆರೋಪಿ ಬಂಧನ
Advertisement

ಮಂಡ್ಯ :ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ,ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಬಂಧಿತ ಪ್ರಮುಖ ಆರೋಪಿ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ.

ಈಗಾಗಲೇ ಭ್ರೂಣ ಹತ್ಯೆ ಕೇಸ್​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಅಭಿಷೇಕ್ ಪಾಂಡವಪುರ ತಾಲೂಕಿನ ಎಂ ಶೆಟ್ಟಿಹಳ್ಳಿ ನಿವಾಸಿ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement