ಹೆಣ್ಣು ಭ್ರೂಣ ಹತ್ಯೆ - ಪ್ರಮುಖ ಆರೋಪಿ ಬಂಧನ
09:49 AM Sep 05, 2024 IST | BC Suddi
Advertisement
ಮಂಡ್ಯ :ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ,ಅಭಿಷೇಕ್ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್ ಬಂಧಿತ ಪ್ರಮುಖ ಆರೋಪಿ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ.
ಈಗಾಗಲೇ ಭ್ರೂಣ ಹತ್ಯೆ ಕೇಸ್ನಲ್ಲಿ ವಿರೇಶ್ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಅಭಿಷೇಕ್ ಪಾಂಡವಪುರ ತಾಲೂಕಿನ ಎಂ ಶೆಟ್ಟಿಹಳ್ಳಿ ನಿವಾಸಿ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
Advertisement
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.