ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹೈನುಗಾರಿಕೆಗೆ ಸಹಾಯಧನ: ಅರ್ಜಿ ಆಹ್ವಾನ

08:09 AM Nov 22, 2023 IST | Bcsuddi
Advertisement

 

Advertisement

ಹೊಸಪೇಟೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಲ್ಲಿ ವಿಶೇಷ ಘಟಕ ಯೋಜನೆ ಮತ್ತು  ಗಿರಿಜನ ಉಪ ಯೋಜನೆ ಅನುಷ್ಠಾನಗೊಳಿಸಲು ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಒಂದು ಮಿಶ್ರತಳಿ ಹಸು/ ಸುಧಾರಿತ ಎಮ್ಮೆ ಘಟಕಕ್ಕೆ ಒಟ್ಟು ಮೊತ್ತ ರೂ. 65,000, ಇದರಲ್ಲಿ ಶೇ.90ರಷ್ಟು ಅಂದರೆ ರೂ. 58,500 ಸಹಾಯಧನ ಮತ್ತು ಉಳಿಕೆ ಮೊತ್ತ ರೂ. 6,500 ಫಲಾನುಭವಿಯ ವಂತಿಕೆ ಅಥವಾ ಬ್ಯಾಂಕ್ ಸಾಲವಾಗಿದೆ. ಯೋಜನೆಯಡಿ ವಿಜಯನಗರ ಹಾಗೂ ಹಗರಿಬೊಮ್ಮನಹಳ್ಳಿ ವಿಧಾನಸಭಾಕ್ಷೇತ್ರಕ್ಕೆ ತಲಾ 02 ರಂತೆ ಪರಿಶಿಷ್ಟ ಜಾತಿಯವರಿಗೆ ಒಟ್ಟು 4 ಗುರಿ ನಿಗದಿಪಡಿಸಲಾಗಿದೆ. ಪರಿಶಿಷ್ಟ ಪಂಗಡದವರಿಗೆ ವಿಜಯನಗರಕ್ಕೆ 3 ಹಾಗೂ ಹಗರಿಬೊಮ್ಮನಹಳ್ಳಿಗೆ 2 ಸೇರಿ ಒಟ್ಟು 5 ಗುರಿ ನಿಗದಿಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ.33ರಷ್ಟು, ವಿಶೇಷ ಚೇತನರಿಗೆ ಶೇ.3ರ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ಪಶು ಆಸ್ಪತ್ರೆ, ಹೊಸಪೇಟೆ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ಹೈನುಗಾರಿಕೆಗೆ ಸಹಾಯಧನ: ಅರ್ಜಿ ಆಹ್ವಾನ
Advertisement
Next Article