ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹೊತ್ತಿ ಉರಿದ ಸ್ಲೀಪರ್ ಬಸ್, ಇಬ್ಬರು ಪ್ರಯಾಣಿಕರು ಸಜೀವ ದಹನ

10:26 AM Nov 09, 2023 IST | Bcsuddi
Advertisement

ಗುರುಗ್ರಾಮ: ಸ್ಲೀಪರ್​ ಬಸ್ ಗೆ ​ ಏಕಾಏಕಿ ಹೊತ್ತಿ ಉರಿದ ಪರಿಣಾಮ, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾದ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ನಡೆದಿದೆ. ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

Advertisement

ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್‌ಗೆ ಬುಧವಾರ ರಾತ್ರಿ ಗುರುಗ್ರಾಮ್ ತಲುಪುತ್ತಿದ್ದಂತೆ ಬಸ್​​ನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ನಿದ್ರಾವಸ್ಥೆಯಲ್ಲಿದ್ದ ಇಬ್ಬರು ಬೆಂಕಿ ಕೆನ್ನಾಲಿಗೆಗೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸ್ಲೀಪರ್‌ ಬಸ್‌ನಿಂದ ಎರಡು ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನೊಂದೆಡೆ, ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ದೆಹಲಿ ಜೈಪುರ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಆಗಿತ್ತು. ಜಾಮ್ ತೆರವುಗೊಳಿಸಲು ಪೊಲೀಸ್ ಸಿಬ್ಬಂದಿ ತುಂಬಾ ಕಷ್ಟಪಡುವಂತಾಯಿತು.

Advertisement
Next Article