For the best experience, open
https://m.bcsuddi.com
on your mobile browser.
Advertisement

BREAKING : 'ಕಾನೂನು ಕುರುಡಲ್ಲ' ಎಂಬ ಸಂದೇಶ ಸಾರಿದ ಸುಪ್ರೀಂ : ಕಣ್ಣು ತೆರೆದ ನ್ಯಾಯ ದೇವತೆಯ ಪ್ರತಿಮೆ ಅನಾವರಣ

10:07 AM Oct 17, 2024 IST | BC Suddi
breaking    ಕಾನೂನು ಕುರುಡಲ್ಲ  ಎಂಬ ಸಂದೇಶ ಸಾರಿದ ಸುಪ್ರೀಂ   ಕಣ್ಣು ತೆರೆದ ನ್ಯಾಯ ದೇವತೆಯ ಪ್ರತಿಮೆ ಅನಾವರಣ
Advertisement

ನವದೆಹಲಿ: ಲೇಡಿ ಆಫ್ ಜಸ್ಟಿಸ್ ನ್ಯಾಯದೇವತೆ ಪ್ರತಿಮೆಯ ಮೇಲಿನ ಕಣ್ಣಿಗೆ ಪಟ್ಟಿಯನ್ನು ತೆಗೆದುಹಾಕಲಾಗಿದೆ. ಆಕೆಯ ಎಡಗೈಯಲ್ಲಿ ಕತ್ತಿಯ ಬದಲಾಗಿ ಸಂವಿಧಾನದ ಪುಸ್ತಕವನ್ನು ಇರಿಸಲಾಗಿದೆ.

ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿದ ನ್ಯಾಯದೇವತೆಯ ಪ್ರತಿಮೆಯ ಬದಲು ಕಣ್ಣು ತೆರೆದ ನ್ಯಾಯ ದೇವತೆಯ ಪ್ರತಿಮೆಯನ್ನು ಸುಪ್ರೀಂ ಕೋರ್ಟ್​ನಲ್ಲಿ ಅನಾವರಣಗೊಳಿಸಲಾಗಿದೆ. ಈ ಹಿಂದಿನ ಪ್ರತಿಮೆಯ ಕೈಯಲ್ಲಿದ್ದ ಕತ್ತಿಯ ಬದಲಾಗಿ ಹೊಸ ನ್ಯಾಯದೇವತೆಯ ಕೈಯಲ್ಲಿ ಸಂವಿಧಾನದ ಪುಸ್ತಕವನ್ನು ಇರಿಸಲಾಗಿದೆ.

ಕಾನೂನು ಕುರುಡಲ್ಲ ಎಂಬ ಸಂದೇಶ ಸಾರುವ ಸಲುವಾಗಿ ಈ ಹೊಸ ಪ್ರತಿಮೆ ನಿರ್ಮಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ಹೊಸ ಪ್ರತಿಮೆಯ ಅನಾವರಣ ಮಾಡಿದ್ದು, ಭಾರತೀಯ ನ್ಯಾಯದ ವಿಕಾಸದ ಸ್ವರೂಪವನ್ನು ಒತ್ತಿಹೇಳಿದ್ದಾರೆ.

Advertisement

Author Image

Advertisement