ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

BREAKING: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್‌ 27ಕ್ಕೆ ಮುಂದೂಡಿಕೆ

04:14 PM Sep 23, 2024 IST | BC Suddi
Advertisement

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್‌ ಸೆಪ್ಟೆಂಬರ್‌ 27ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ದರ್ಶನ್ ಅವರ ಪರ ವಕೀಲರು, ಶನಿವಾರ ಜಾಮೀನು ಕೋರಿ ನಗರದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರು ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಿ, ಸೆಪ್ಟೆಂಬರ್‌ 23ಕ್ಕೆ ವಿಚಾರಣೆ ಮುಂದೂಡಿದ್ದರು. ಅದರಂತೆ ಇಂದು ವಿಚಾರಣೆ ನಡೆಸಿದ ಕೋರ್ಟ್‌ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್‌ 27ಕ್ಕೆ ಮುಂದೂಡಿಕೆ ಮಾಡಿದೆ. ಏನಿದು ಪ್ರಕರಣ?: ಜೂನ್‌ 8ರಂದು ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಸ್ವಾಮಿ ಕೊಲೆ ನಡೆದಿತ್ತು. ಕೊಲೆ ಆರೋಪದ ಅಡಿ ಜೂನ್‌ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಇನ್ನೂ 16 ಮಂದಿಯನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ಎಸಿಪಿ ಚಂದನ್‌ ಅವರನ್ನು ನೇಮಿಸಲಾಗಿತ್ತು. ಚಂದನ್‌ ನೇತೃತ್ವದ ತಂಡವು ತನಿಖೆ ನಡೆಸಿ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಸೆ.4ರಂದು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ದೋಷಾರೋಪ ಪಟ್ಟಿ ಸಲ್ಲಿಸಿ, 18 ದಿನಗಳ ಬಳಿಕ ದರ್ಶನ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Advertisement

Advertisement
Next Article