BREAKING: ಮಂಗಳೂರು- ಇಬ್ಬರು ಮಕ್ಕಳು ಸಮುದ್ರಪಾಲು
05:35 PM Dec 09, 2023 IST
|
Bcsuddi
Advertisement
ಮಂಗಳೂರು: ಸಮುದ್ರತೀರದಲ್ಲಿ ಆಟವಾಡುವ ವೇಳೆ ಅಪ್ಪಳಿಸಿದ ಅಲೆಗಳ ನಡುವೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾಗಿರು ಘಟನೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ.
Advertisement
ಸಮುದ್ರಪಾಲದವರು ಪರಿಜ್ಞಾನ ದ್ವಿತೀಯ ಪಿಯುಸಿ ಕಾಲೇಜಿನ ಯಶ್ವಿತ್, ಯುವರಾಜ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಸ್ಥಳೀಯ ಈಜುಗಾರರು ಹಾಗೂ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಸಮುದ್ರಪಾಲಾದವರು ಮಂಜೇಶ್ವರ ಕುಂಜತ್ತೂರು, ಅಡ್ಕ ನಿವಾಸಿಗಳು ಎಂದು ತಿಳಿದು ಬಂದಿದೆ.
ಸೋಮೇಶ್ವರ ಸಮುದ್ರ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಈಜಲು ತೆರಳದಂತೆ ಉಳ್ಳಾಲ ಠಾಣಾಧಿಕಾರಿ ಹೆಚ್. ಎನ್ ಬಾಲಕೃಷ್ಣ ಸೂಚನೆ ನೀಡಿದ್ದಾರೆ.
Next Article