ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ ಕಣ್ಣುತುಂಬಿಕೊಂಡ ಭಕ್ತರು.!
08:09 AM Oct 17, 2024 IST
|
BC Suddi
Advertisement
Advertisement
ಮಡಿಕೇರಿ: ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವವಾಗಿದೆ. ನಿಗಧಿತ ಸಮಯದಂತೆ ಇಂದು 7.40ಕ್ಕೆ ಬ್ರಹ್ಮ ಕುಂಡಿಕೆಯಿಂದ ಕಾವೇರಿ ಜಲಧಾರೆ ತೀರ್ಥೋದ್ಬವಗೊಂಡಿತು.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರ ಇಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಿದೆ.
ಪ್ರಧಾನ ಅರ್ಚಕ ಪ್ರಶಾಂತ್ ಅಚಾರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆದಿದ್ದು, ಕಾವೇರಿ ತೀರ್ಥೋದ್ಬವದ ಬೆನ್ನಲ್ಲೇ ಸಹಸ್ರಾರು ಭಕ್ತರು ಜಯಘೋಷ ಹಾಕಿದ್ದಾರೆ. ಇಂದು ನಡೆದಂತ ಕಾವೇರಿ ತೀರ್ಥೋದ್ಭವದಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ಭಾಗವಹಿಸಿ, ಪವಿತ್ರ ತೀರ್ಥೋದ್ಭವದಲ್ಲಿ ಮಿಂದೆದ್ದರು.
Next Article