ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಈ ಕಾರಣಕ್ಕೆ ವಿದ್ಯುತ್ ಗೋಪುರ ಮುಟ್ಟದಿರಲು ಸೂಚನೆ

07:15 AM May 05, 2024 IST | Bcsuddi
Advertisement

 

Advertisement

ಚಿತ್ರದುರ್ಗ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ ಹಿರಿಯೂರು ತಾಲ್ಲೂಕು ವ್ಯಾಪ್ತಿಯ ಕಸ್ತೂರಿ ರಂಗಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ 66/11 ಕೆವಿ ಕಸ್ತೂರಿ ರಂಗಪ್ಪನಹಳ್ಳಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹಾಲಿ ಇರುವ 66ಕೆವಿ ಹಿರಿಯೂರು-ಜವನಗೊಂಡನಹಳ್ಳಿ ವಿದ್ಯುತ್ ಮಾರ್ಗದಿಂದ 0.144ಕಿ.ಮೀ ಉದ್ದದ ಉದ್ದೇಶಿತ 66ಕೆವಿ ಲಿಲೋ ಪ್ರಸರಣ ಮಾರ್ಗದ ಕಾಮಗಾರಿಯು ಮುಕ್ತಾಯಗೊಂಡಿರುವುದರಿಂದ ಈ 66 ಕೆವಿ ವಿದ್ಯುತ್ ಮಾರ್ಗವನ್ನು ಮೇ 5 ರಂದು ಅಥವಾ ತದನಂತರ ಚೇತನಗೊಳಿಸುವುದರಿಂದ ಈ 66ಕೆವಿ ಪ್ರಸರಣ ಮಾರ್ಗದ ವಿದ್ಯುತ್ ಗೋಪುರಗಳನ್ನು  ಮುಟ್ಟುವುದಾಗಲಿ,  ಹತ್ತುವುದಾಗಲಿ, ಮರದ ರೆಂಬೆ, ಲೋಹದ ತಂತಿಗಳನ್ನು ಹಾಗೂ ಇತರೆ ಯಾವುದೇ ವಸ್ತುಗಳನ್ನು ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದು ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಈ ಮಾರ್ಗದ ಮೊಗಸಾಲೆಯಲ್ಲಿ ಅಪಾಯದ ಮಟ್ಟದಲ್ಲಿ ಇರುವ ಮರಗಳನ್ನು ಸುರಕ್ಷತೆಯ ದೃಷ್ಠಿಯಿಂದ ತೆಗೆದು ಹಾಕಲು ನಿಗಮದ ನಿಯಮಾನುಸಾರ ಸೂಕ್ತ ಪರಿಹಾರ ಪಡೆದುಕೊಂಡು ಮರಗಳನ್ನು ತೆಗೆಯದೇ ಇರುವ ಭೂ ಮಾಲೀಕರು ಕೂಡಲೇ ಮಾರ್ಗದ ಮೊಗಸಾಲೆಯಲ್ಲಿರುವ ಮರಗಳನ್ನು ಕಡಿದು ಹಾಕಲು ಅನುಮತಿ ನೀಡಬೇಕು. ಒಂದು ವೇಳೆ ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಮಾರ್ಗದಿಂದ ಸಾರ್ವಜನಿಕರಿಗೆ ಆಗುವ ಹಾನಿ, ತೊಂದರೆ, ಅಪಘಾತಗಳಿಗೆ ವಿದ್ಯುತ್ ಪ್ರಸರಣ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.

ವಿದ್ಯುತ್ ಹಾದುಹೋಗುವ ಮಾರ್ಗಗಳು : ಕಸ್ತೂರಿ ರಂಗಪ್ಪನಹಳ್ಳಿ ಗ್ರಾಮ ವ್ಯಾಪ್ತಿಯ ಡಿ.ಮಂಜುನಾಥ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಮಾರ್ಗ ಹಾದು ಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
For this reasonnotice not to touch the electricity tower
Advertisement
Next Article