For the best experience, open
https://m.bcsuddi.com
on your mobile browser.
Advertisement

ಇಸ್ರೋಗಿದೆ ವಿಜ್ಞಾನ-ತಂತ್ರಜ್ಞಾನ ಉತ್ತೇಜಿಸುವ ಗುರಿ : ಇಸ್ರೋ ವಿಜ್ಞಾನಿ ಪಿ.ವಿ.ಎನ್.ಮೂರ್ತಿ

07:36 AM Oct 24, 2024 IST | BC Suddi
ಇಸ್ರೋಗಿದೆ ವಿಜ್ಞಾನ ತಂತ್ರಜ್ಞಾನ ಉತ್ತೇಜಿಸುವ ಗುರಿ   ಇಸ್ರೋ ವಿಜ್ಞಾನಿ ಪಿ ವಿ ಎನ್ ಮೂರ್ತಿ
Advertisement

ದಾವಣಗೆರೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನ ಉತ್ತೇಜಿಸುವ ಗುರಿ ಮತ್ತು ಉದ್ದೇಶ ಹೊಂದಿದ್ದು, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಬೇಕೆಂದು ಇಸ್ರೋ ವಿಜ್ಞಾನಿ ಪಿ.ವಿ.ಎನ್.ಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬುಧವಾರ ಇಸ್ರೋ ಮತ್ತು ಶ್ರೀಸತ್ಯಸಾಯಿ ವಿದ್ಯಾವಾಹಿನಿ ಜಂಟಿಯಾಗಿ ಆಯೋಜಿಸಿದ್ದ ಸ್ಪೇಸ್ ಆನ್‌ವೀಲ್ಸ್ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನಗಳ ಬಗ್ಗೆ ಹೆಚ್ಚು ಹೆಚ್ಚು ಜ್ಞಾನ ಸಂಪಾದಿಸುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಸಲಹೆ ನೀಡಿದರು.

ಕಾರ್ಯಕ್ರಮz ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್, ನಮ್ಮ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಒಂದಾಗಿದೆ. ಕೇವಲ ಅಧಿಕಾರ, ಹಣ ಗಳಿಸುವುದು ಯಶಸ್ಸಲ್ಲ. ನಾವು ಮಾಡುವ ಕೆಲಸವನ್ನು ಸಂತೋಷವಾಗಿ, ಪರಿಣಾಮಕಾರಿಯಾಗಿ ನಿರ್ವಹಿಸಿದರೆ ಅದೇ ಯಶಸ್ಸು. ವಿದ್ಯಾವಂತರು ಬಹು ರಾಷ್ಟಿçÃಯ ಕಂಪನಿಗಳಲ್ಲಿ ಉದ್ಯೋಗ ಸಂಪಾದಿಸುವ ಗುರಿಯನ್ನು ಹೊಂದಿದ್ದಾರೆ. ಆದರೆ ಮೂಲ ವಿಜ್ಞಾನವನ್ನು ಅಧ್ಯಯನ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಇಸ್ರೋದಲ್ಲಿ ವಿಜ್ಞಾನಿಗಳಾಗಿ ಆಯ್ಕೆಯಾಗಬೇಕು ಎಂದು ಸಲಹೆ ನೀಡಿದರು.

Advertisement

ಈಶ್ವರಮ್ಮ ಶಾಲಾಡಳಿತ ಮಂಡಳಿ ಅಧ್ಯಕ್ಷರಾದ  ಕೆ.ಆರ್.ಸುಜಾತಕೃಷ್ಣ ಮಾತನಾಡಿ, ಪುಟ್ಟಪರ್ತಿಯ ಶ್ರೀಸತ್ಯಸಾಯಿ ವಿದ್ಯಾವಾಹಿನಿಯ ಸಹಯೋಗದೊಂದಿಗೆ ಈಶ್ವರಮ್ಮ ಶಾಲೆಯಲ್ಲಿ ಸ್ಪೇಸ್ ಆನ್ ವೀಲ್ಸ್ ಪ್ರದರ್ಶನ ಬೃಹತ್ ಕಾರ್ಯಕ್ರಮ ಏರ್ಪಡಿಸಿದ್ದೇವೆ. ಪಿ.ವಿ.ಎನ್.ಮೂರ್ತಿ ಅವರು ಇಸ್ರೋದ ಶ್ರೇಷ್ಠ ವಿಜ್ಞಾನಿಗಳು. ಭಾರತ ದೇಶ ವಿಶ್ವವೇ ಗುರುತಿಸುವ ಇಂತಹ ಮಹಾನ್ ವ್ಯಕ್ತಿಗಳ ಸಾಧನೆಯಿಂದ ವಿಶ್ವ ಗುರುವಾಗಿದೆ. ಸಮಾಜ ನಮಗೇನು ಕೊಟ್ಟಿದೆ ಎಂದು ಕೇಳುವ ಬದಲು ಸಮಾಜಕ್ಕಾಗಿ ನಾವೇನು ಕೊಡುಗೆಯನ್ನು ಕೊಟ್ಟಿದ್ದೇವೆ ಎಂದು ಚಿಂತಿಸಬೇಕೆAದು ತಿಳಿಸಿದರು.

ಇದೇ ಸಂದರ್ಭದಲ್ಲಿ ಇಸ್ರೋದ ಹಿರಿಯ ವಿಜ್ಞಾನಿಗಳಾದ ಪಿ.ವಿ.ಎನ್. ಮೂರ್ತಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಿಡಿಪಿಐ ಜಿ.ಕೊಟ್ರೇಶ್, ತಹಸೀಲ್ದಾರ್ ಡಾ.ಅಶ್ವತ್, ಈಶ್ವರಮ್ಮ ಟ್ರಸ್ಟ್ ಅಧ್ಯಕ್ಷರಾದ ಎ.ಆರ್.ಉಷಾರಂಗನಾಥ್, ಕಾರ್ಯದರ್ಶಿ ಜಿ.ಆರ್.ವಿಜಯಾನಂದ್, ಈಶ್ವರಮ್ಮ ಶಾಲಾಡಳಿತÀ ಮಂಡಳಿ ಖಜಾಂಚಿ ಎ.ಪಿ.ಸುಜಾತ, ಶ್ರೀಸತ್ಯಸಾಯಿ ವಿದ್ಯಾವಾಹಿನಿ ಸಂಸ್ಥೆಯ ಸದಸ್ಯರು ಹಾಗೂ ದಾವಣಗೆರೆ ಖಾಸಗಿ ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್ ಅಗಡಿ, ಶ್ರೀಸತ್ಯಸಾಯಿ ವಿದ್ಯಾವಾಹಿನಿಯ ಸಂಚಾಲಕರಾದ ಸುಬ್ರಮಣ್ಯ, ಗೌತಮ್, ವೆಂಕಟೇಶ್ ಬಡಿಗೇರ್, ಈಶ್ವರಮ್ಮ ಶಾಲೆಯ ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ ಇದ್ದರು.

ಶಿಕ್ಷಕಿ ರಂಜನಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ.ಸುನೀತಾ ನಿರೂಪಿಸಿದರು.  ಕೆ.ಎಸ್.ಪ್ರಭುಕುಮಾರ್ ವಂದಿಸಿದರು

Tags :
Author Image

Advertisement