ಬಿಪಿಎಲ್ ಕಾರ್ಡ್ದಾರರಿಗೆ ಮುಂದಿನವಾರದಿಂದ ಖಾತೆಗೆ ಹಣ ಜಮಾ: ಆಹಾರ ಸಚಿವ ಕೆಎಚ್ ಮುನಿಯಪ್ಪ.!
07:41 AM Oct 13, 2024 IST | BC Suddi
Advertisement
ಕೋಲಾರ : ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾ ಆಗುತ್ತಿತ್ತು. ಇತ್ತೀಚಿಗೆ ಕೆಲವು ತಿಂಗಳಗಳವರೆಗೆ ಹಣ ಜಮೆ ಆಗಿರಲಿಲ್ಲ.ಸರ್ವರ್ ಸಮಸ್ಯೆಯಿಂದ ಈ ಒಂದು ಹಣ ಜಮೆ ಆಗಿಲ್ಲ. ಹಾಗಾಗಿ ಮುಂದಿನ ವಾರ ಎಲ್ಲಾ ಹಣ ಒಟ್ಟಿಗೆ ಜಮಾ ಆಗುತ್ತದೆ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ತಿಂಗಳು 10ರಂದು ಹಣ ಬಿಡುಗಡೆಯಾಗುತ್ತಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಹಣ ಬಿಡುಗಡೆ ವಿಳಂಬವಾಗಿದೆ. ಬಾಕಿ ಹಣ ಮುಂದಿನ ವಾರ ಬಿಡುಗಡೆಯಾಗಲಿದೆ. ಅದೇ ರೀತಿ ಬಿಪಿಎಲ್ ಅರ್ಹತೆ ಪರಿಶೀಲಿಸಿ ಅನರ್ಹರನ್ನ ಎಪಿಎಲ್ಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
Advertisement