For the best experience, open
https://m.bcsuddi.com
on your mobile browser.
Advertisement

SBI, PNB ಜೊತೆಗಿನ ವಹಿವಾಟು ಸ್ಥಗಿತಗೊಳಿಸಿದ ಕರ್ನಾಟಕ ಸರ್ಕಾರ

04:31 PM Aug 15, 2024 IST | BC Suddi
sbi  pnb ಜೊತೆಗಿನ ವಹಿವಾಟು ಸ್ಥಗಿತಗೊಳಿಸಿದ ಕರ್ನಾಟಕ ಸರ್ಕಾರ
Advertisement

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಜೊತೆಗಿನ ಎಲ್ಲಾ ವಹಿವಾಟುಗಳನ್ನು ಕರ್ನಾಟಕ ಸರ್ಕಾರ ಸ್ಥಗಿತಗೊಳಿಸಿದೆ ಎಂದು ರಾಜ್ಯ ಹಣಕಾಸು ಇಲಾಖೆ ಬುಧವಾರ ಪ್ರಕಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿರುವ ಮತ್ತು ಹಣಕಾಸು ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ ಈ ಬ್ಯಾಂಕ್‌ಗಳಲ್ಲಿನ ಖಾತೆಗಳನ್ನು ಮುಚ್ಚಲು ಮತ್ತು ಠೇವಣಿಗಳನ್ನು ತಕ್ಷಣವೇ ಮರುಪಡೆಯಲು ರಾಜ್ಯದ ಎಲ್ಲಾ ಇಲಾಖೆಗಳಿಗೆ ಸೂಚಿಸಲಾಗಿದೆ. ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಇತರ ಸಂಸ್ಥೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ತಕ್ಷಣವೇ ಮುಕ್ತಾಯಗೊಳಿಸಬೇಕು. ಈ ಬ್ಯಾಂಕ್‌ಗಳಲ್ಲಿ ಯಾವುದೇ ಹೆಚ್ಚಿನ ಠೇವಣಿ ಅಥವಾ ಹೂಡಿಕೆಗಳನ್ನು ಮಾಡಬಾರದು ಎಂದು ತಿಳಿಸಲಾಗಿದೆ. ಸರ್ಕಾರದ ಹಣ ದುರುಪಯೋಗ ಮತ್ತು ಅಕ್ರಮ ವಹಿವಾಟಿನ ಆರೋಪಗಳ ನಡುವೆ ಈ ಆದೇಶ ಹೊರಬಿದ್ದಿದೆ.

Author Image

Advertisement