ಭೋವಿ ನಿಗಮದಲ್ಲಿ ಹಗರಣಕ್ಕೆ ನಮ್ಮದೇನು ಪಾತ್ರವಿಲ್ಲ.! MLC ಸುನೀಲ್ ವಲ್ಯಾಪುರೆ ಸ್ಪಷ್ಟನೆ
05:08 PM Oct 19, 2024 IST | BC Suddi
Advertisement
ಕಲಬುರ್ಗಿ : ನಗರದ ತಮ್ಮ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ ಬಗ್ಗೆ ಮಾತನಾಡಿದ MLC ಸುನೀಲ್ ವಲ್ಯಾಪುರೆ ಅವರು, ಭೋವಿ ನಿಗಮದಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿ ನಮ್ಮದೇನೂ ಪಾತ್ರ ಇಲ್ಲ ಎಂದು ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನಮ್ಮ ಮನೆಯಲ್ಲಿ ಏನಾದ್ರು ಸಿಗಬಹುದು ಅಂತ ನನ್ನ ಮನೆಯಲ್ಲಿ ಸರ್ಚ್ ಮಾಡ್ತಿದ್ದಾರೆ. ಇಲ್ಲೇನ್ ಬದನೇಕಾಯಿಯೂ ಸಿಗಲ್ಲ. ಸಿಐಡಿ ಅಧಿಕಾರಿಗಳು ಸರ್ಚ್ ಮಾಡ್ತಿದ್ದಾರೆ ನಾನು ಅವರಿಗೆ ಸಹಕಾರ ನೀಡುತ್ತೇನೆ. ಅಧಿಕಾರಿಗಳು ಅವರ ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು.
Advertisement
ಭೋವಿ ನಿಗಮದಲ್ಲಿ ಅವ್ಯವಹಾರ ಆಗಿದೆ ಅಂತ ನಾನೇ ಧ್ವನಿ ಎತ್ತಿದ್ದೆ. ಕಳೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಭೋವಿ ನಿಗಮದಲ್ಲಿ ಅವ್ಯವಹಾರ ಆಗಿದೆ ಅಂತ ಪ್ರಸ್ತಾವನೆ ಸಲ್ಲಿಸಿ ಮಾತನಾಡಿದ್ದೆ. ಈ ಹಗರಣದಲ್ಲಿ ಕೆಲವು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಅವರೇ ನನ್ನ ಮೇಲೆ ಗೂಬೆ ಕುರಿಸಲು ಈ ರೀತಿ ಮಾಡ್ತಿದ್ದಾರೆ ಎಂದು ಆರೋಪಿಸಿದರು.